Latest Kannada Nation & World

ಕಾಸರಗೋಡು ಪಟಾಕಿ ದುರಂತ, 150ಕ್ಕೂ ಹೆಚ್ಚು ಜನರಿಗೆ ಗಾಯ, 10 ಮಂದಿ ಸ್ಥಿತಿ ಗಂಭೀರ; ನಿಯಮ ಉಲ್ಲಂಘನೆಯೇ ಅವಘಡಕ್ಕೆ ಕಾರಣ

Share This Post ????

ಸ್ಥಳೀಯ ಸಿಪಿಐ (ಎಂ) ಶಾಸಕ ಎಂ ರಾಜಗೋಪಾಲ್ ಈ ಘಟನೆಯನ್ನು ತುಂಬಾ ದುರದೃಷ್ಟಕರ ಎಂದು ಕರೆದಿದ್ದಾರೆ. ಕಾಸರಗೋಡು ಸಂಸದ ರಾಜ್ ಮೋಹನ್ ಉನ್ನಿಥಾನ್ ಮಾತನಾಡಿ, ಸುರಕ್ಷತಾ ಪ್ರೋಟೋಕಾಲ್​​ಗಳನ್ನು ಖಚಿತಪಡಿಸಿಕೊಳ್ಳಲು ವಿಫಲವಾದ ಅಧಿಕಾರಿಗಳ ಕಡೆಯಿಂದ ಗಂಭೀರ ಲೋಪವಾಗಿದೆ ಎಂದು ಹೇಳಿದ್ದಾರೆ. ಗಂಭೀರವಾಗಿ ಗಾಯಗೊಂಡವರಿಗೆ ಶೇಕಡಾ 80 ರಷ್ಟು ಸುಟ್ಟ ಗಾಯಗಳಾಗಿವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಈ ದುರಂತಕ್ಕೆ ಕಾರಣ ಏನೆಂಬದನ್ನು ಪತ್ತೆ ಹಚ್ಚಲಾಗುತ್ತಿದೆ. ಸ್ಥಳದಿಂದ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಪ್ರಕರಣ ದಾಖಲಿಸಲಾಗಿದೆ ಎಂದಿದ್ದಾರೆ. ಪಟಾಕಿ ಸ್ಫೋಟಗೊಳ್ಳುತ್ತಿದ್ದಂತೆ ಬೆಚ್ಚಿಬಿದ್ದ ಸಾವಿರಾರು ಜನರು, ದಿಕ್ಕಾಪಾಲಾಗಿ ಓಡಿದ್ದಾರೆ. ಈ ವೇಳೆ ಕಾಲ್ತುಳಿತವೂ ಸಂಭವಿಸಿತು.

Related Articles

Leave a Reply

Your email address will not be published. Required fields are marked *

Back to top button
Home
Search
Hot News
Advertise
error: Content is protected !!