Latest Kannada Nation & World
ಕಾಸರಗೋಡು ಪಟಾಕಿ ದುರಂತ, 150ಕ್ಕೂ ಹೆಚ್ಚು ಜನರಿಗೆ ಗಾಯ, 10 ಮಂದಿ ಸ್ಥಿತಿ ಗಂಭೀರ; ನಿಯಮ ಉಲ್ಲಂಘನೆಯೇ ಅವಘಡಕ್ಕೆ ಕಾರಣ

ಸ್ಥಳೀಯ ಸಿಪಿಐ (ಎಂ) ಶಾಸಕ ಎಂ ರಾಜಗೋಪಾಲ್ ಈ ಘಟನೆಯನ್ನು ತುಂಬಾ ದುರದೃಷ್ಟಕರ ಎಂದು ಕರೆದಿದ್ದಾರೆ. ಕಾಸರಗೋಡು ಸಂಸದ ರಾಜ್ ಮೋಹನ್ ಉನ್ನಿಥಾನ್ ಮಾತನಾಡಿ, ಸುರಕ್ಷತಾ ಪ್ರೋಟೋಕಾಲ್ಗಳನ್ನು ಖಚಿತಪಡಿಸಿಕೊಳ್ಳಲು ವಿಫಲವಾದ ಅಧಿಕಾರಿಗಳ ಕಡೆಯಿಂದ ಗಂಭೀರ ಲೋಪವಾಗಿದೆ ಎಂದು ಹೇಳಿದ್ದಾರೆ. ಗಂಭೀರವಾಗಿ ಗಾಯಗೊಂಡವರಿಗೆ ಶೇಕಡಾ 80 ರಷ್ಟು ಸುಟ್ಟ ಗಾಯಗಳಾಗಿವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಈ ದುರಂತಕ್ಕೆ ಕಾರಣ ಏನೆಂಬದನ್ನು ಪತ್ತೆ ಹಚ್ಚಲಾಗುತ್ತಿದೆ. ಸ್ಥಳದಿಂದ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಪ್ರಕರಣ ದಾಖಲಿಸಲಾಗಿದೆ ಎಂದಿದ್ದಾರೆ. ಪಟಾಕಿ ಸ್ಫೋಟಗೊಳ್ಳುತ್ತಿದ್ದಂತೆ ಬೆಚ್ಚಿಬಿದ್ದ ಸಾವಿರಾರು ಜನರು, ದಿಕ್ಕಾಪಾಲಾಗಿ ಓಡಿದ್ದಾರೆ. ಈ ವೇಳೆ ಕಾಲ್ತುಳಿತವೂ ಸಂಭವಿಸಿತು.