Latest Kannada Nation & World
ಟಾಕ್ಸಿಕ್ ಬಳಿಕ ಕಾಂತಾರ ಚಿತ್ರತಂಡದ ಮೇಲೂ ಅರಣ್ಯ ನಾಶ ಆರೋಪ? ರಿಷಬ್ ಶೆಟ್ಟಿ ಚಿತ್ರಕ್ಕೆ ಸಂಕಷ್ಟದ ಮೇಲೆ ಸಂಕಷ್ಟ

Kantara Chapter 1: ರಿಷಬ್ ಶೆಟ್ಟಿ ನಿರ್ದೇಶಕನದ ಮತ್ತು ನಾಯಕನಾಗಿ ನಟಿಸುತ್ತಿರುವ ಕಾಂತಾರ ಚಾಪ್ಟರ್ 1 ಸಿನಿಮಾ ಬಗ್ಗೆ ಸದ್ಯ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಮೊದಲ ಭಾಗದ ಅಭೂತಪೂರ್ವ ಯಶಸ್ಸಿನ ಬಳಿಕ, ಎರಡನೇ ಭಾಗದ ಮೇಲೆ ಕರ್ನಾಟಕ ಮಾತ್ರವಲ್ಲದೆ, ದೇಶದ ಸಿನಿಮಾ ಪ್ರಿಯರ ಗಮನ ಈ ಸಿನಿಮಾ ಮೇಲಿದೆ. ಇಂತಿಪ್ಪ ಕಾಂತಾರ ಚಾಪ್ಟರ್ 1 ಚಿತ್ರ ಸದ್ಯ ಶೂಟಿಂಗ್ ಹಂತದಲ್ಲಿದೆ. ಹೀಗಿರುವಾಗಲೇ, ಇದೇ ತಂಡದ ವಿರುದ್ಧ ಅರಣ್ಯ ನಾಶ ಆರೋಪ ಕೇಳಿಬಂದಿದೆ.