Latest Kannada Nation & World
‘ಕೌರ್’ಗಳ ಅಬ್ಬರಕ್ಕೆ ಆರ್ಸಿಬಿ ತತ್ತರ; ರೋಚಕ ಹಣಾಹಣಿಯಲ್ಲಿ ಸ್ಮೃತಿ ಪಡೆಗೆ ಸೋಲುಣಿಸಿದ ಮುಂಬೈ ಇಂಡಿಯನ್ಸ್

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದ ರೋಚಕ ಹಣಾಹಣಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 4 ವಿಕೆಟ್ಗಳಿಂದ ಸೋಲಿಸುವ ಮೂಲಕ ಮುಂಬೈ ಇಂಡಿಯನ್ಸ್ ಡಬ್ಲ್ಯುಪಿಎಲ್ನಲ್ಲಿ ಎರಡನೇ ಗೆಲುವು ಸಾಧಿಸಿತು. ಕೌರ್ಗಳ ಅಬ್ಬರಕ್ಕೆ ತತ್ತರಿಸಿದ ಆರ್ಸಿಬಿ, ಟೂರ್ನಿಯಲ್ಲಿ ಮೊದಲ ಸೋಲಿಗೆ ಶರಣಾಯಿತು. ಎಲ್ಲಿಸ್ ಪೆರಿ (81) ಅವರ ಸ್ಫೋಟಕ ಆಟದ ನೆರವಿನಿಂದ ಆರ್ಸಿಬಿ 7 ವಿಕೆಟ್ ನಷ್ಟಕ್ಕೆ 167 ರನ್ ಕಲೆ ಹಾಕಿತು. ಇದಕ್ಕೆ ಉತ್ತರವಾಗಿ ಮುಂಬೈ 19.5 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿ ಗೆದ್ದು ಬೀಗಿತು. ನಾಯಕಿ ಹರ್ಮನ್ಪ್ರೀತ್ ಕೌರ್ (50) ಮತ್ತು ಅಮನ್ಜೋತ್ ಕೌರ್ (34*) ಅಬ್ಬರದ ಆಟವಾಡಿ ತವರಿನಲ್ಲಿ ಆರ್ಸಿಬಿ ಗೆಲುವಿನ ಕನಸನ್ನು ಭಗ್ನಗೊಳಿಸಿದರು.