Latest Kannada Nation & World
ಚಾಂಪಿಯನ್ ಇಂಡಿಯಾ ಮಾಸ್ಟರ್ಸ್, ರನ್ನರ್ಅಪ್ ವೆಸ್ಟ್ ಇಂಡೀಸ್ ಮಾಸ್ಟರ್ಸ್ಗೆ ಬಹುಮಾನ ಮೊತ್ತ ಸಿಕ್ಕಿದ್ದೆಷ್ಟು?

ವಿಜೇತರು, ರನ್ನರ್ಅಪ್ ತಂಡಕ್ಕೆ ಸಿಕ್ಕ ಬಹುಮಾನ ಎಷ್ಟು?
ಚಾಂಪಿಯನ್ ಭಾರತ ತಂಡಕ್ಕೆ ಭರ್ಜರಿ ಬಹುಮಾನ ಮೊತ್ತ ಸಿಕ್ಕಿತು. ಸಚಿನ್ ತೆಂಡೂಲ್ಕರ್, ಯುವರಾಜ್ ಸಿಂಗ್, ಯೂಸುಫ್ ಪಠಾಣ್ ಮತ್ತು ಇರ್ಫಾನ್ ಪಠಾಣ್ ಅವರನ್ನೊಳಗೊಂಡ ಇಂಡಿಯಾ ಮಾಸ್ಟರ್ಸ್ ತಂಡವು 1 ಕೋಟಿ ರೂ.ಗಳ ನಗದು ಬಹುಮಾನವನ್ನು ಗೆದ್ದುಕೊಂಡಿತು. ರನ್ನರ್ ಅಪ್ ಸ್ಥಾನ ಪಡೆದ ವೆಸ್ಟ್ ಇಂಡೀಸ್ ಮಾಸ್ಟರ್ಸ್ಗೆ 50 ಲಕ್ಷ ರೂ ಬಹುಮಾನ ಮೊತ್ತ ಸಿಕ್ಕಿತು. 50 ಎಸೆತಗಳಲ್ಲಿ 74 ರನ್ ಗಳಿಸಿದ ಅಂಬಾಟಿ ರಾಯುಡು ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಅವರು 50,000 ರೂ.ಗಳ ನಗದು ಬಹುಮಾನವನ್ನು ಗೆದ್ದರು.