Latest Kannada Nation & World
ಬೆಂಗಳೂರಿಗೆ ಹೊರಟಿದ್ದ ಆಕಾಶ್ ಏರ್ ವಿಮಾನಕ್ಕೆ ಬಾಂಬ್ ಬೆದರಿಕೆ; ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ

ನವದೆಹಲಿ: ಬೆಂಗಳೂರಿಗೆ ಹೊರಟಿದ್ದ ಆಕಾಶ್ ಏರ್ ವಿಮಾನಕ್ಕೆ ಬುಧವಾರ (ಅಕ್ಟೋಬರ್ 16) ಬಾಂಬ್ ಬೆದರಿಕೆ ಎದುರಾದ ಕಾರಣ, ಅದು ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ಧಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿತು. ವಿಮಾನದಲ್ಲಿ 184 ಜನ ಇದ್ದರು. ಆಕಾಶ್ ಏರ್ ಈ ಕುರಿತು ಹೇಳಿಕೆ ನೀಡಿದ್ದು, ವಿಮಾನ ಸಂಖ್ಯೆ ಕ್ಯೂಪಿ 1335 ವಿಮಾನವು ದೆಹಲಿಯ ವಿಮಾನ ನಿಲ್ದಾಣದಲ್ಲಿ ಇಂದು ಮಧ್ಯಾಹ್ನ 2 ಗಂಟೆಗೆ ತುರ್ತು ಭೂಸ್ಪರ್ಶ ಮಾಡಿದೆ ಎಂದು ವಿವರಿಸಿದೆ. ಕಳೆದ ಕೆಲವು ದಿನಗಳಿಂದ ಸಾಲು ಸಾಲು ಬಾಂಬ್ ಬೆದರಿಕೆ ಕರೆಗಳನ್ನು ವಿಮಾನ ಯಾನ ಸಂಸ್ಥೆಗಳು ಎದುರಿಸುತ್ತಿವೆ.