Latest Kannada Nation & World

ಮಾಲಿನ್ಯವನ್ನು ಯಾವುದೇ ಧರ್ಮ ಬೆಂಬಲಿಸಲ್ಲ, ದೆಹಲಿಯಲ್ಲಿ ಪಟಾಕಿ ನಿಷೇಧ ಜಾರಿಗೊಳಿಸಿ: ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನಿರ್ದೇಶನ

Share This Post ????

ನವದೆಹಲಿ: ವಾಯು ಮಾಲಿನ್ಯವನ್ನು ಪ್ರಚೋದಿಸುವ ಯಾವುದೇ ಚಟುವಟಿಕೆಯನ್ನು ಯಾವುದೇ ಧರ್ಮವು ಪ್ರೋತ್ಸಾಹಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಅಷ್ಟೇ ಅಲ್ಲ, ನವೆಂಬರ್ 25 ರೊಳಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಾಶ್ವತವಾಗಿ ಪಟಾಕಿ ನಿಷೇಧ ಜಾರಿಗೊಳಿಸಬೇಕು ಎಂದು ದೆಹಲಿ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ. “ಮಾಲಿನ್ಯ ಮುಕ್ತ ವಾತಾವರಣದಲ್ಲಿ ಬದುಕುವ ಹಕ್ಕು ಸಂವಿಧಾನದ 21 ನೇ ವಿಧಿಯ ಪ್ರಕಾರ ಮೂಲಭೂತ ಹಕ್ಕು. ಮೊದಲ ನೋಟಕ್ಕೆ ಹೇಳುವುದಾದರೆ ಯಾವುದೇ ಧರ್ಮವು ಮಾಲಿನ್ಯವನ್ನು ಉತ್ತೇಜಿಸುವ ಅಥವಾ ಜನರ ಆರೋಗ್ಯದೊಂದಿಗೆ ರಾಜಿ ಮಾಡಿಕೊಳ್ಳುವ ಯಾವುದೇ ಚಟುವಟಿಕೆಯನ್ನು ಉತ್ತೇಜಿಸುವುದಿಲ್ಲ ಎಂದು ನಾವು ಭಾವಿಸುತ್ತೇವೆ”ಎಂದು ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಅಗಸ್ಟಿನ್ ಜಾರ್ಜ್ ಮಸಿಹ್ ಅವರನ್ನು ಒಳಗೊಂಡ ಸುಪ್ರೀಂ ಕೋರ್ಟ್‌ನ ನ್ಯಾಯ ಪೀಠವು ಹೇಳಿತು.

Related Articles

Leave a Reply

Your email address will not be published. Required fields are marked *

Back to top button
Home
Search
Hot News
Advertise
error: Content is protected !!