Latest Kannada Nation & World
AIADMK ಜೊತೆ ಮೈತ್ರಿ ಮಾಡದೆಯೇ ಇಷ್ಟು ಸ್ಥಾನ ಗೆಲ್ಲುತ್ತೆ ಎಂದ ಪ್ರಶಾಂತ್ ಕಿಶೋರ್

ಚೆನ್ನೈ: ಮುಂದಿನ ವರ್ಷ (2026) ತಮಿಳುನಾಡು ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಗೂ ಮುನ್ನ ಈ ಬಾರಿ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿರುವುದು ನಟ ದಳಪತಿ ವಿಜಯ್. ತಮಿಳಗ ವೆಟ್ರಿ ಕಾಳಗಂ (TVK -Thamizhaga Vettri Kazhagam) ಪಕ್ಷ ಸ್ಥಾಪಿಸಿರುವ ವಿಜಯ್, ತಮಿಳುನಾಡಿನಲ್ಲಿ ಗೆಲುವು ಸಾಧಿಸಿ ಆಡಳಿತ ನಡೆಸುವ ವಿಶ್ವಾಸದಲ್ಲಿದ್ದಾರೆ. ಇದೀಗ ರಾಜಕೀಯ ತಂತ್ರಜ್ಞ ಮತ್ತು ಜನ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಕೂಡಾ ಇದಕ್ಕೆ ಪುಷ್ಠಿ ನೀಡುವ ಹೇಳಿಕೆ ನೀಡಿದ್ದಾರೆ. ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಜೊತೆ ಮೈತ್ರಿ ಮಾಡದೆಯೇ ನಟ ವಿಜಯ್ ಸ್ಥಾಪಿಸಿದ ರಾಜಕೀಯ ಪಕ್ಷ ಟಿವಿಕೆ ಗೆಲುವು ಸಾಧಿಸಲಿದೆ ಎಂದು ಪ್ರಶಾಂತ್ ಕಿಶೋರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.