Latest Kannada Nation & World
ಶಬರಿಮಲೆಗೆ ಅರಣ್ಯ ಮಾರ್ಗದಲ್ಲಿ ಮೆಟ್ಟಲು ಹತ್ತಿ ದರ್ಶನ ಹೋಗುವುದಕ್ಕೆ ತಡೆ: ಪಾಸ್ ರದ್ದುಪಡಿಸಿದ ದೇವಸ್ಥಾನ ಮಂಡಳಿ

ಈ ಹಿಂದೆ ಅರಣ್ಯ ಮಾರ್ಗದಲ್ಲಿ ಸಂಚರಿಸುವ 5,000 ಭಕ್ತರಿಗೆ ವಿಶೇಷ ಪಾಸ್ ನೀಡುವ ವ್ಯವಸ್ಥೆ ಮಾಡಲಾಗಿತ್ತು. ಆದರೆ, ಅರಣ್ಯ ಮಾರ್ಗವಾಗಿ ಆಗಮಿಸುವ ಭಕ್ತರ ಸಂಖ್ಯೆ ಐದು ಪಟ್ಟು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ವಿಶೇಷ ಪಾಸ್ ನೀಡುವುದಕ್ಕೆ ನಿರ್ಬಂಧ ಹೇರಲಾಗಿದೆ. ಮುಂದಿನ ಸೂಚನೆ ಬರುವವರೆಗೂ ವಿಶೇಷ ಪಾಸ್ಗಳನ್ನು ನೀಡದಿರಲು ಮಂಡಳಿ ನಿರ್ಧರಿಸಿದೆ ಎಂದು ಪ್ರಕಟಣೆ ತಿಳಿಸಿದೆ.